No menu items!
Tuesday, February 11, 2025

ಕಾಂಗ್ರೆಸ್ ಗೆ ಗುಡ್ ಬಾಯ್, ಜೆಡಿಎಸ್ ಬಾಗಿಲಲ್ಲಿ ಇಬ್ರಾಹಿಂ

Must read

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ಅವರು, ತಮ್ಮ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ. ಅಲ್ಲದೇ ಜೆಡಿಎಸ್ ಸೇರುವ ಖಚಿತ ಸೂಚನೆ ನೀಡಿದ್ದಾರೆ.

“ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡುತ್ತೇನೆ,” ಎಂದು ಸಿಎಂ ಇಬ್ರಾಹಿಂ ಘೋಷಿಸಿದರು. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಬರೆದಿರುವ ಅವರು, “ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಚುನಾವಣೆ ನಡೆಸಿದ್ದರೆ 13 ಸದಸ್ಯರ ಬೆಂಬಲದೊಂದಿಗೆ ಗೆಲುವು ಸಾಧಿಸುತ್ತಿದ್ದೆ. ‌ಆದರೆ ಆ ರೀತಿ ಮಾಡದೆ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿರುವುದು ನನಗೆ ತೀವ್ರ ಬೇಸರ ಉಂಟಾಗಿದೆ. ಈ ಬಗ್ಗೆ ಕೇಳಿದ್ದ ಪ್ರಶ್ನೆಗೂ ನನಗೆ ಈವರೆಗೆ ಯಾವುದೇ ಉತ್ತರ ಸಿಕ್ಕಿಲ್ಲ. ಈ ಎಲ್ಲಾ ಬೆಳವಣಿಗೆಗಳಿಂದಾಗಿ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ,” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ ಇಂದೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದು ತಿಳಿಸಿದರು.

ಸ್ವಾಭಿಮಾನ ಹಾಗೂ ರಾಜ್ಯದ ಹಿತ ದೃಷ್ಡಿಯಿಂದ ಈ ರಾಜೀನಾಮೆ ತಮಗೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನಲ್ಲಿ ಸ್ವಾಭಿಮಾನದಿಂದ ಇರಲು ಸಾಧ್ಯವಿಲ್ಲ. 1994ರಲ್ಲಿ ಆದ ರಾಜಕೀಯ ಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಪಂಚರಾಜ್ಯ ಚುನಾವಣೆಯಲ್ಲಿ ಇದು ಗೋಚರವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇವತ್ತು ಅಥವಾ ನಾಳೆ ನಾನು ದೇವೇಗೌಡರು ಕುಮಾರಸ್ವಾಮಿ ಜೊತೆ ಕುಳಿತು ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡಲಿದ್ದೇವೆ. ಗೊತ್ತಿಲ್ಲದ ದಾರಿಯಲ್ಲಿ ಹೋಗುವುದಕ್ಕಿಂತ ಗೊತ್ತಿರುವ ದಾರಿಯಲ್ಲಿ ಹೋಗುವುದು ಒಳ್ಳೆಯದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ವಿಫಲವಾಗಿದ್ದು, ಕಾಂಗ್ರೆಸ್ ತೊರೆಯುವುದು ಅಧಿಕೃತವಾಗಿದೆ. ಈ ಹಿನ್ನೆಲೆಯಲ್ಲಿ ತವರು ಪಕ್ಷವಾದ ಜೆಡಿಎಸ್ ವಾಪಸಾಗುವುದು ಬಹುತೇಕ ಖಚಿತವಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!